ಉತ್ತರ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎನ್ ವಿಷ್ಣುವರ್ಧನ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೇವೆಯಲ್ಲಿದ್ದ ಎಸ್ಪಿ ಡಾ. ಸುಮನ್ ಡಿ ಪನ್ನೇಕರ್ ಅವರನ್ನು ಸಿಐಡಿ ವಿಭಾಗದ ಎಸ್ಪಿಯಾಗಿ ನೇಮಿಸಲಾಗಿದೆ.
ನೂತನ ಎಸ್ಪಿ ಎನ್ ವಿಷ್ಣುವರ್ಧನ್ ಅವರು ಈ ಹಿಂದೆ ಉಡುಪಿ ಜಿಲ್ಲೆಯಲ್ಲಿ ಎಸ್ಪಿಯಾಗಿದ್ದು, ಇತ್ತೀಚೆಗಷ್ಠೆ ಗುಪ್ತಚರ ಇಲಾಖೆ ಬೆಂಗಳೂರು ಇದರ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.