ಕಿಶೋರ ಯಕ್ಷಗಾನ ಸಮಾರೋಪ

ಕಾಪುವಿನ ಬಂಟರ ಸಂಘದ ಎದುರು ನಿರ್ಮಿಸಿದ ಕಾಪು ಲೀಲಾಧರ ಶೆಟ್ಟಿ ವೇದಿಕೆಯಲ್ಲಿ ಜರಗಿದ ಯಕ್ಷಶಿಕ್ಷಣ ಟ್ರಸ್ಟ್ನ ಕಾಪು ಭಾಗದ ಏಳು ಶಾಲೆಗಳ ಪ್ರದರ್ಶನ ದಿನಾಂಕ ೨೪.೧೨.೨೦೨೩ರಂದು ಸಮಾಪನಗೊಂಡಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರೋಪ ಸಮಾರಂಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಮನೋಹರ ಶೆಟ್ಟಿ, ಡಾ. ಪ್ರಶಾಂತ್ ಶೆಟ್ಟಿ, ಡಾ. ಶಶಿರಾಜ್ ಶೆಟ್ಟಿ ಎಂ. ಗಂಗಾಧರ ರಾವ್ ಅಭ್ಯಾಗತರಾಗಿ ಭಾಗವಹಿಸಿದ್ದರು. ಶಾಲೆಗಳ ಮುಖ್ಯಸ್ಥರಿಗೆ ಪ್ರಮಾಣಪತ್ರವನ್ನು ನೀಡಲಾಯಿತು.

ಸಂಯೋಜಕ ವಿ. ಜಿ. ಶೆಟ್ಟಿ ಸ್ವಾಗತಿಸಿದರು. ಪ್ರಭಾತ್ ಶೆಟ್ಟಿ ವಂದಿಸಿದರು. ಶ್ರೀಕರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ ಸಹಕರಿಸಿದರು. ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಸಮಾರಂಭದ ನಂತರ ದoಡತೀರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಯಕ್ಷೋತ್ತಮ ಕಾಳಗ ಪ್ರಸಂಗ ಪ್ರಸ್ತುತಗೊoಡಿತು.

 
 
 
 
 
 
 
 
 
 
 

Leave a Reply