ಯಕ್ಷಶಿಕ್ಷಣ ಗುರುಗಳ ಸಮಾಲೋಚನಾ ಸಭೆ

ಉಡುಪಿ : ಉಡುಪಿ ವಿಧಾನ ಸಭಾ ವ್ಯಾಪ್ತಿಯ ಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್ ಗುರುಗಳ ಸಮಾಲೋಚನಾ ಸಭೆ ಇಂದು 15-06-2022ರಂದು ಸಂಜೆ 5.30ಕ್ಕೆ ಯಕ್ಷಗಾನ ಕಲಾರಂಗದ ಕಛೇರಿಯಲ್ಲಿ ಜರಗಿತು. 20 ಮಂದಿ ಯಕ್ಷಗುರುಗಳು ಸಭೆಯಲ್ಲಿ ಭಾಗವಹಿಸಿ ದ್ದರು. ಈ ವರ್ಷ ಸುಮಾರು 50 ಪ್ರೌಢ ಶಾಲೆಗಳಲ್ಲಿ ಯಕ್ಷಶಿಕ್ಷಣ ತರಬೇತಿ ನಡೆಸಲು ಉದ್ದೇಶಿಸಿದೆ.

ಟ್ರಸ್ಟ್ ನ ವಿಶ್ವಸ್ಥರಾದ ಎಸ್.ವಿ. ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಅವರು ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ ಯಕ್ಷಶಿಕ್ಷಣ ತರಬೇತಿಯು ಪರಿಣಾಮಕಾರಿಯಾಗಿ ನಡೆಸಿ ಈ ಅಭಿಯಾನವು ಯಶಸ್ವಿಗೊಳಿಸುವಲ್ಲಿ ಗುರುಗಳು ಸಹಕರಿಸಬೇಕೆಂದು ವಿನಂತಿಸಿದರು. ಗುರುಗಳಿಗೆ ಶಾಲೆಗಳನ್ನು ಹಂಚಿಕೆ ಮಾಡಿ ಜೂನ್ 25ರ ಒಳಗೆ ತರಗತಿಗಳನ್ನು ಪ್ರಾರಂಭಿಸಬೇಕೆಂದು ಸೂಚಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರುಗಳಾದ ಪ್ರೊ. ನಾರಾಯಣ ಎಂ. ಹೆಗಡೆ, ಹೆಚ್.ಎನ್. ಶೃಂಗೇಶ್ವರ ಹಾಗೂ ಮಂಜುನಾಥ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply