ರಾಜ್ಯದ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ, ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಸುನೀಲ್ ಕುಮಾರ್, ಶ್ರೀ ಎಂ.ಟಿ.ಬಿ.ನಾಗರಾಜ್, ಶ್ರೀ ಭೈರತಿ ಬಸವರಾಜ್, ಶ್ರೀ ಮುನಿರತ್ನ ಮತ್ತು ಶ್ರೀ ಆನಂದ್ ಸಿಂಗ್ ಅವರಿಗೆ ಗೌರವಾರ್ಪಣೆ ನಡೆಯಲಿದೆ. ಅಲ್ಲದೆ, ಒಬಿಸಿ ಸಮುದಾಯದ ಶಾಸಕ ರಿಗೆ ಗೌರವಾರ್ಪಣೆಯೂ ನೆರವೇರಲಿದೆ ಎಂದು ಅವರು ತಿಳಿಸಿದ್ದಾರೆ.
ಸಂಸದರಾದ ಶ್ರೀ ಪಿ.ಸಿ. ಮೋಹನ್ ಮತ್ತು ಶ್ರೀ ನಾರಾಯಣ್ ಅವರನ್ನೂ ಗೌರವಿಸಲಾಗುವುದು. ಕಾರ್ಯಕರ್ತರ ಜೊತೆ ಭೇಟಿಗೆ ಇದೊಂದು ಅವಕಾಶ ಎಂದು ತಿಳಿಸಿದ್ದು, ನೀಟ್ ಪರೀಕ್ಷೆಯಲ್ಲಿ ಒಬಿಸಿ ಸಮುದಾಯಕ್ಕೆ ಶೇ 27ರಷ್ಟು ಅವಕಾಶ ನೀಡಿದ ಜನಪರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಕ್ರಮವನ್ನು ಸ್ವಾಗತಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಸಂಪುಟಕ್ಕೆ ಒಬಿಸಿ ಸಮುದಾಯದ 27 ಜನರನ್ನು ಸೇರ್ಪಡೆಗೊಳಿಸಿದ್ದನ್ನು ಮೋರ್ಚಾ ಸ್ವಾಗತಿಸುತ್ತದೆ. ಇಂಥ ಕ್ರಮಕ್ಕಾಗಿ ಪ್ರಧಾನಿ ಶ್ರೀ ಮೋದಿ ಅವರಿಗೆ ಕೃತಜ್ಞತೆ ಸಲ್ಲಿ ಸುತ್ತದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಮುಖ್ಯಮಂತ್ರಿಗಳು ಏಳು ಜನ ಹಿಂದುಳಿದ ಸಮಾಜದ ಸಚಿªರನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ.
ರಾಜ್ಯದ ಸಂಸದರು, ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಚುನಾವಣಾ ಪ್ರತಿನಿಧಿ ಗಳು ಮತ್ತು ಒಬಿಸಿ ಸಮುದಾಯಗಳ ಮುಖಂಡರು, ಒ.ಬಿ.ಸಿ ಮೋರ್ಚಾ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.