ಜನವರಿ 19ರಂದು ಹೆಜಮಾಡಿ ಬಂದರು ಕಾಮಗಾರಿಗೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಶಿಲಾನ್ಯಾಸ:ಯಶ್‌ಪಾಲ್ ಸುವರ್ಣ ಹರ್ಷ

ಕರಾವಳಿ ಭಾಗದ ಮೀನುಗಾರರ ಬಹು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಬಂದರು ಕಾಮಗಾರಿಗೆ 180.84ಕೋಟಿ ಮಂಜೂರು ಮಾಡಿ, ಜನವರಿ 19 ರಂದು ಕಾಮಗಾರಿಯ ಶಿಲಾನ್ಯಾಸ ನೆರವೇರಿಸಲು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ರವರನ್ನು ಸಮಸ್ತ ಮೀನುಗಾರರ ಪರವಾಗಿ ಸ್ವಾಗತಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಕೊರೋನ ಸಂದರ್ಭದಲ್ಲಿಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿ ಬಂದರಿಗೆ 180.84 ಕೋಟಿ ಮೊತ್ತವನ್ನು ಮಂಜೂರು ಮಾಡಿ ಕರಾವಳಿ ಮೀನು ಗಾರಿಕೆಯ ಅಭಿವೃದ್ಧಿ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರಕಾರ ತಮ್ಮ ಕಳಕಳಿ ಹಾಗೂ ಬದ್ಧತೆಯನ್ನು ಪ್ರದರ್ಶಿಸಿದೆ.

ಕರಾವಳಿ ಕರ್ನಾಟಕದ ಆರ್ಥಿಕತೆಯಲ್ಲಿ ಮಹತ್ವದ ಪಾತ್ರವಹಿಸಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಈ ಅವಳಿ ಜಿಲ್ಲೆಗಳ ಉತ್ಪನ್ನವಾಗಿ ಸಾಗರೋತ್ಪನ್ನವನ್ನು ಆಯ್ಕೆ ಮಾಡುವ ಮೂಲಕ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ಹೆಜ್ಜೆ ಇಟ್ಟಿದೆ.  ಈ ಹೆಜಮಾಡಿ ಬಂದರು ಅಭಿವೃದ್ಧಿಯ ಮೂಲಕ ಸರಕಾರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಮೀನು ಗಾರಿಕೆ ಅಭಿವೃದ್ಧಿಗೆ ಸರಕಾರ ವಿಶೇಷ ಪ್ರೋತ್ಸಾಹ ನೀಡಿದಂತಾಗಿದೆ.

ಈ ಕಾಮಗಾರಿಯ ಮಂಜೂರಾತಿಗೆ ವಿಶೇಷ ಆಸಕ್ತಿ ವಹಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಕೇಂದ್ರ ಬಂದರು ಸಚಿವರಾದ ಶ್ರೀ ನಿತಿನ್ ಗಡ್ಕರಿ, ಕೇಂದ್ರ ಮೀನುಗಾರಿಕಾ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಮುಖ್ಯ ಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಸವ ರಾಜ ಬೊಮ್ಮಾಯಿ, ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, 

ಮೀನುಗಾರ ಮುಖಂಡರಾದ ನಾಡೋಜ ಡಾ| ಜಿ. ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ ಕೋಟ್ಯಾನ್ ಹಾಗೂ ಕರಾವಳಿ ಭಾಗದ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 

Leave a Reply