ಯಶ್ ಪಾಲ್ ಸುವರ್ಣ ನೇತೃತ್ವದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ರೂ. 1.32 ಕೋಟಿ ಮೌಲ್ಯದ ವಿವಿಧ ಸವಲತ್ತುಗಳ ವಿತರಣೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಶ್ರೀ ಮಾರಿಯಮ್ಮ ದೇವಸ್ಥಾನ ಊರ್ವ ಇದರ ಸಭಾಂಗಣದಲ್ಲಿ ಮಣಿಪಾಲ ಸಿಗ್ನಾ‌ ಪ್ರೋಹೆಲ್ತ್ ಗ್ರೂಪ್ ಇಂಶ್ಯೂರೆನ್ಸ್ ಕಾರ್ಡ್, ವಿದ್ಯಾರ್ಥಿ ವೇತನ ಹಾಗೂ ಸದಸ್ಯ ಗ್ರಾಹಕರಿಗೆ, ಸಹಕಾರಿ ಸಂಘಗಳಿಗೆ ಪ್ರೋತ್ಸಾಹಕ ಉಡುಗೊರೆ ವಿತರಣಾ ಸಮಾರಂಭ ಶ್ರೀ ಯಶ್ ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾರಂಭವನ್ನು ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ ಜಿ ಶಂಕರ್ ಉದ್ಘಾಟಿಸಿದರು.

 

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ರಾಮಚಂದ್ರ ಬೈಕಂಪಾಡಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ ಕೋಟ್ಯಾನ್, ಉಪಾಧ್ಯಕ್ಷರಾದ ಶ್ರೀ ಸುಭಾಶ್ ಕಾಂಚನ್, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಅಧಿಕಾರಿ ಶ್ರೀ ಮಧುಪ್ ದ್ವಿವೇದಿ, ಶ್ರೀ ಮಾರಿಯಮ್ಮ ದೇವಸ್ಥಾನ ಉರ್ವದ ಆಡಳಿತ ಮೊಕ್ತೇಸರರಾದ ಶ್ರೀ ದೇವಾನಂದ, ಉದ್ಯಮಿಗಳಾದ ಶ್ರೀ ಮೋಹನ್ ಬೆಂಗ್ರೆ, ಮಂಗಳೂರು ಏಳುಪಟ್ಣ ಸಂಯುಕ್ತ ಸಭಾ ಅಧ್ಯಕ್ಷರಾದ ಶ್ರೀ ಗೌತಮ್ ಕೋಡಿಕಲ್, ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಪುರುಷೋತ್ತಮ ಅಮೀನ್, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಹರೀಶ್ ಕುಮಾರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply