ಶಾಸಕ ಯಶ್ ಪಾಲ್ ಸುವರ್ಣರ ಪ್ರಗತಿ ಪರಿಶೀಲನಾ ಸಭೆ

ಬ್ರಹ್ಮಾವರ ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಬ್ರಹ್ಮಾವರ ತಾಲೂಕಿನ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದರು.

ಸಭೆಯಲ್ಲಿ ತಾಲೂಕಿನ ಕುಡಿಯುವ ನೀರು ಸರಬರಾಜು, ಮೆಸ್ಕಾಂ ಸಂಬಂಧಿತ ದೂರುಗಳು, ಹಕ್ಕು ಪತ್ರ, ಜಲ ಜೀವನ್ ಮಿಷನ್, ಅರಣ್ಯ ಇಲಾಖೆ, ಅಕ್ರಮ ಸಕ್ರಮ ಅರ್ಜಿಗಳು ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸಮಸ್ಯೆಗಳ ತುರ್ತು ಪರಿಹಾರಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಬ್ರಹ್ಮಾವರ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀ ಎಚ್. ವಿ. ಇಬ್ರಾಹಿಂಪುರ್, ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗಡೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply