ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ವಿಪ್ರ ಮಹಿಳಾ ದಿನಾಚರಣೆ ಮತ್ತು ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಆಶ್ರಯದಲ್ಲಿ ವಿಪ್ರ ಮಹಿಳಾ ದಿನಾಚರಣೆ ಮತ್ತು ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ ಸಮಾರಂಭವು ದಿನಾಂಕ. 18.03.2023 ಶನಿವಾರದಂದು ಸಂಜೆ 5:30 ರಿಂದ ಗುಂಡಿ ಬೈಲಿನ ಪರಿಷತ್ತಿನ ಬ್ರಾಹ್ಮಿ ಸಭಾಭವನದಲ್ಲಿ ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಸಂತಿ ರಾವ್ ಕೊರಡ್ಕಲ್ ಇವರ ಉಪಸ್ಥಿತಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ರಾಜಲಕ್ಷ್ಮಿ ಇವರಿಂದ ಮಹಿಳೆಯರ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳು ಎಂಬ ವಿಷಯದ ಬಗ್ಗೆ ಮಾಹಿತಿ ಉಪನ್ಯಾಸ ಹಾಗೂ ಸಾಧಕಿಯರಾದ ವಿದುಷಿ ಪವನ ಬಿ. ಆಚಾರ್, ಕವಯಿತ್ರಿ ಜ್ಯೋತಿ ಮಹಾದೇವ್, ಸಮಾಜ ಸೇವಕಿ ಡಾ. ಅರ್ಚನಾ ಕೆ. ಹಾಗೂ ಯುವ ಯಕ್ಷ ಪ್ರತಿಭೆ ಪ್ರಣಮ್ಯ ತಂತ್ರಿ ಇವರನ್ನು ಪರಿಷತ್ತಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವುದು ಹಾಗೂ ಅಶಕ್ತರಿಗೆ ಸಹಾಯಧನ ಹಸ್ತಾಂತರ , ನೂತನ ಮಹಿಳಾ ಸದಸ್ಯರ ಸೇರ್ಪಡೆ , ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿರುವುದು ಎಂದು ಪರಿಷತ್ತಿನ ಅಧ್ಯಕ್ಷರಾದ ಶ್ರೀ ಚೈತನ್ಯ ಎಂ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply