ಎಳ್ಳಾರೆ ಭಜನಾ ಮಂಡಳಿ:ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಪಂಚಮ ವರ್ಷದ ವಾರ್ಷಿಕೋತ್ಸವ ಮತ್ತು ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ಸ್ವಾಮಿ ದೇವರ ಸನ್ನಿಧಿಯಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಜನಾರ್ದನ ಆಚಾರ್ಯರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸಂಸ್ಥಾಪಕರಾದ ದೇವೇಂದ್ರ ಕಾಮತ್ ಎಳ್ಳಾರೆ, ಅಧ್ಯಕ್ಷೆ ದಿವ್ಯಾ ಕಾಮತ್,ಎಳ್ಳಾರೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶಾಂತಿ ಪ್ರಭು,ಮಂಡಳಿಯ ಗೌರವ ಸಲಹೆಗಾರರಾದ ಜ್ಯೋತಿ ಎಸ್. ನಾಯಕ್, ರವೀಂದ್ರ ಪ್ರಭು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply