ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕೆ. ವಿ. ಅವರನ್ನು ನೇಮಿಸಲಾಗಿದೆ.
ಡಾ. ರಾಜೇಂದ್ರ ಕೆ. ವಿ. ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ- ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಾ. ರಾಜೇಂದ್ರ ಕೆ.ವಿ ಅವರು ೨೦೧೩ರ ಕರ್ನಾಟಕ ಕೆಡೆರ್ ನ ಐಎಎಸ್ ಅಧಿಕಾರಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವರಾಗಿರುವ ಅವರು ಈ ಹಿಂದೆ ವೈದ್ಯರಾಗಿದ್ದರು. ಬಳಿಕ ಐಎಎಸ್ ಪರೀಕ್ಷೆ ಬರೆದು ದೇಶದಲ್ಲಿ ೩೨ನೇ ರ್ಯಾಂಕ್ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದರು.