ಪಿಪಿಸಿ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ 

ಉಡುಪಿ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕನ್ನಡಭಾಷಾ ವಿದ್ಯಾರ್ಥಿಗಳು ಮಣಿಪಾಲದ ಕಮ್ಯುನಿಟಿ ರೇಡಿಯೋ ಸ್ಟೇಷನ್ನಿನಲ್ಲಿ ಕನ್ನಡ ನಾಡು, ನುಡಿ ಕುರಿತ ಗೀತಗಾಯನ, ಸ್ವರಚಿತ ಸಣ್ಣಕಥೆ, ಕವನ ವಾಚನ, ಕನ್ನಡದ ಉಪಭಾಷೆಯಲ್ಲಿ ಯುಗಳ ಸಂಭಾಷಣೆ, ರಸಪ್ರಶ್ನೆ, ಭಾಷಣ, ಪ್ರಬಂಧ, ಕನ್ನಡಾಭಿಮಾನವನ್ನು ಬಿಂಬಿಸುವ ಯಕ್ಷಗಾನ ಪದ್ಯದ ಗಾಯನ ಮೊದಲಾದ ವೈವಿಧ್ಯಮಯ ಸಾಂಸ್ಕೃತಿಕ ವೈಭವ ಪ್ರಸ್ತುತ ಪಡಿಸಿದರು.
 
ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿ ವೇದಿಕೆಯ ಸಂಯೋಜಕರಾದ ಕನ್ನಡ ಉಪನ್ಯಾಸಕ ಶಿವಕುಮಾರ ಅಳಗೋಡು ಹಾಗೂ ಕಮ್ಯುನಿಟಿ ರೇಡಿಯೋದ ಮಂಜುನಾಥ ಹಿಲಿಯಾಣ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply