ವಡಭಾಂಡೇಶ್ವರ ಬಲರಾಮ ದೇವಳ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ

ಮಲ್ಪೆ, ಅ.15: ಉಡುಪಿ ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶರನ್ನವರಾತ್ರಿ ಆರಂಭದ ದಿನ ಬ್ರಾಹ್ಮೀ ಮುಹೂರ್ತದಲ್ಲಿ ಶಿಲಾನ್ಯಾಸ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಭಾನುವಾರ ಮುಂಜಾನೆ 5 ಗಂಟೆಯ ಸುಮುಹೂರ್ತದಲ್ಲಿ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಿ ಶುಭ ನುಡಿಯ ಮೂಲಕ ಸತ್ಕಾರ್ಯದ ನಿರ್ವಿಘ್ನ ಸಿದ್ಧಿಗೆ ಹರಸಿದರು. 

ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಶಾಸಕ ಯಶಪಾಲ್ ಸುವರ್ಣ, ಸುಬ್ರಹ್ಮಣ್ಯ ಭಟ್, ಉದ್ಯಮಿ ಆನಂದ ಸುವರ್ಣ, ನಾಗರಾಜ ಮೂಲಿಗಾರ್,  ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವೃಂದ ಸೇರಿದಂತೆ ಅನೇಕ ಮಂದಿ ಗಣ್ಯರು, ಭಕ್ತರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply