ದೇವಸ್ಥಾನಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರಕಾರದಿಂದ ಬ್ರೇಕ್

ಮೈಸೂರು : ಮೈಸೂರಿನ ದೇವಸ್ಥಾನಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಇದೀಗ ಅಲ್ಪ ಮಟ್ಟಿಗೆ ಬ್ರೇಕ್ ಬಿದ್ದಿದೆ. ರಾಜ್ಯಾದ್ಯಂತ ಇಲ್ಲಿನ ದೇವಸ್ಥಾನ ತೆರವು ಕಾರ್ಯಾಚರಣೆ ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳ ವಿರುದ್ಧ ತೀವ್ರ ಜನಾಕ್ರೋಶ ವ್ಯಕ್ತವಾಗಿತ್ತು.

ದೇವಸ್ಥಾನಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ನಗರದ 101 ಗಣಪತಿ ದೇವಸ್ಥಾನದ ತೆರವು ಕಾರ್ಯಾಚರಣೆ ನೊಟೀಸ್ ವಿರುದ್ಧವಾಗಿ ಸಂಸದ ಪ್ರತಾಪ್ ಸಿಂಹ ಅವರು ಆಂದೋಲನವನ್ನೇ ನಡೆಸಿದ್ದರು. 

ಇದೀಗ ಎಚ್ಚೆತ್ತಿರುವ ರಾಜ್ಯ ಸರ್ಕಾರವು ನಂಜನಗೂಡು ದೇಗುಲ ತೆರುವು ಕಾರ್ಯ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತಕ್ಕೆ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ರಾಜ್ಯ ಸರ್ಕಾರದ ಮುಂದಿನ ಆದೇಶ ಬರೋವರೆಗೆ ಯಾಥಾಸ್ಥಿತಿ ಮುಂದುವರೆಸಲು ಆದೇಶ ನೀಡಿದೆ.

 
 
 
 
 
 
 
 
 

Leave a Reply