ಧರ್ಮಸ್ಥಳ: ಊಟ, ವಸತಿ ಇಲ್ಲದೆ ರಸ್ತೆಯಲ್ಲೇ ಮಲಗಿದ ಭಕ್ತಾಧಿಗಳು

ಮಂಗಳೂರು: ಕೊರೊನಾ ಸೋಂಕು ಅತೀ ಹೆಚ್ಚಾಗಿ ಕಂಡು ಬಂದಿರುವ ಕೇರಳ ರಾಜ್ಯದ ಗಡಿ ಭಾಗ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣವಾಗಿ ವೀಕೆಂಡ್ ಕರ್ಫ್ಯೂ ಮಾಡಲಾಗಿದೆ. ಭಾನುವಾರ ರಾತ್ರಿ ಧರ್ಮಸ್ಥಳಕ್ಕೆ ಬಂದ ಯಾತ್ರಿಕರು ಊಟ, ವಸತಿ ಇಲ್ಲದೆ ಪರದಾಡ ಬೇಕಾಯಿತು.

ಜಿಲ್ಲಾಡಳಿತದ ನಿರ್ದೇಶನದಂತೆ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ. ಸೇವೆ ಹಾಗೂ ಪ್ರಸಾದಕ್ಕೆ ಅವಕಾಶವಿಲ್ಲ. ಊಟ, ವಸತಿ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಜಿಲ್ಲಾಡಳಿತದ ಈ ಆದೇಶದಿಂದ ಭಕ್ತಾಧಿಗಳು ಮಾತ್ರ ಪಡಬಾರದ ಕಷ್ಟ ಅನುಭವಿಸಿದ್ದಾರೆ.

ಬಸ್ ಸಂಚಾರಕ್ಕೆ ಅವಕಾಶ ನೀಡಿ, ಉಳಿದ ವ್ಯವಸ್ಥೆಯನ್ನು ತಡೆಹಿಡಿದ ಜಿಲ್ಲಾಡಳಿತದ ಕ್ರಮದಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರು ರಾತ್ರಿ ಮಲಗಲು ವ್ಯವಸ್ಥೆ ಇಲ್ಲದೇ, ರಸ್ತೆಯಲ್ಲಿ ಮಲಗಿ, ಮಳೆಗೆ ನರಕ ಯಾತನೆ ಅನುಭವಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶದಂತೆ ಧರ್ಮಸ್ಥಳ ವಾರಾಂತ್ಯದಲ್ಲಿ ಸಂಪೂರ್ಣ ಬಂದ್ ಆಗಿದ್ದು, ದೇವರ ದರ್ಶನ ಸೇರಿ ವಸತಿ ಗೃಹದಲ್ಲಿ ತಂಗಲು ಕೂಡ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಜಿಲ್ಲಾಡಳಿತದ ಆದೇಶದಂತೆಯೇ ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಕೂಡ ವಸತಿ ಗೃಹಗಳನ್ನು ಮುಚ್ಚಿದೆ.

ಸರಿಯಾದ ಮಾಹಿತಿ ಕೊರತೆಯಿಂದ ಹೊರ ಜಿಲ್ಲೆಗಳಿಂದ ಭಕ್ತರು ಆಗಮಿಸಿ ಪರದಾಡಿದ್ದಾರೆ.

 
 
 
 
 
 
 
 
 

Leave a Reply