ಉಡುಪಿ ಕಡಿಯಾಳಿ ಜೀರ್ಣೋದ್ದಾರಗೊಳ್ಳುತ್ತಿರುವ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಯಾಗಶಾಲೆಗೆ ನಾಳೆ 15/10/2021 ಶುಕ್ರವಾರ ಬೆಳಿಗ್ಗೆ 10.50 ಕ್ಕೆಪೇಜಾವರಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಶಿಲಾನ್ಯಾಸ ನೆರವೇರಿಸಲಿದ್ದಾರೆ .
ಈ ಸಮಾರಂಭದಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದು, ಅಪರ ಜಿಲ್ಲಾಧಿಕಾರಿ ಕೆ ಸದಾಶಿವ ಪ್ರಭು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶ್ರೀ ನಾಗೇಶ ಹೆಗ್ಡೆ, ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ರವಿರಾಜ ವಿ. ಆಚಾರ್ಯ ಉಪಸ್ಥಿತರಿರುವರು. ಶ್ರೀ ದೇವಸ್ಥಾನದ ಜೀರ್ಣೋದ್ಧಾರಕ್ಕೆ ನಿಧಿ ಸಮರ್ಪಿಸುವವರು ಅಂದು ಪೇಜಾವರ ಶ್ರೀಗಳ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ನಿಧಿ ಸಮರ್ಪಿಸ ಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.