ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಕರ್ನಾಟಕ ಸರಕಾರ, ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ಸಚ್ಚಿದಾನಂದ ಮೂರ್ತಿ ಹಾಗು ನಿರ್ದೇಶಕರಾದ ಶಿವರಾಮ ಉಡುಪ ಹಾಗು ಇನ್ನೋರ್ವ ನಿರ್ದೇಶಕರಾದ ಶ್ರೀಯುತ ಸುಬ್ರಾಯ ಹೆಗಡೆಯವರು ಇಂದು ಕೊಡವೂರು ಬ್ರಾಹ್ಮಣ ಮಹಾಸಭಾದ ವಿಪ್ರಶ್ರೀ ಸಾಂಸ್ಕೃತಿಕ ಕಲಾ ಭವನಕ್ಕೆ ಭೇಟಿ ನೀಡಿ ಇಲ್ಲಿಯ ವ್ಯವಸ್ಥೆಗಳನ್ನು ವೀಕ್ಷಿಸಿ ಹರುಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕೊಡವೂರು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀನಿವಾಸ ಉಪಾಧ್ಯ ,ಉಪಾಧ್ಯಕ್ಷರಾದ ಮಂಜುನಾಥ ಭಟ್ , ನಿಕಟಪೂರ್ವ ಅಧ್ಯಕ್ಷ ನಾರಾಯಣ ಬಲ್ಲಾಳ್ , ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್, ಕೋಶಾಧಿಕಾರಿ ಶ್ರೀಧರ ಶರ್ಮ ಹಾಗೂ ಪದಾಧಿಕಾರಿಗಳಾದ ಲಕ್ಷ್ಮೀನಾರಾಯಣ ಭಟ್, ಚಂದ್ರಶೇಖರ್ ರಾವ್ ,ಸುಧೀರ್ ರಾವ್, ಭಾರತಿ ಸುಬ್ರಹ್ಮಣ್ಯ, ಶ್ರೀನಿವಾಸ ಬಾಯರಿ, ದೀಪಾ ರಾಮಕೃಷ್ಣ ಉಪಸ್ಥಿತರಿದ್ದರು.