ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ವೈಭವದ ಶರನ್ನವರಾತ್ರಿ

ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ದಿನಾಂಕ 07-10-2021 ರಿಂದ 15-10-2021ರ ತನಕ ಶರನ್ನವರಾತ್ರಿ ಉತ್ಸವ ವೈಭವದಿಂದ ನಡೆಯಲು ಭಾರಿ ಸಿದ್ಧತೆ ನಡೆಯುತ್ತಿದೆ.

ಈ ಸಂದರ್ಭದಲ್ಲಿ  ಪ್ರತಿದಿನ ಚಂಡಿಕಾಯಾಗ, ರಥೋತ್ಸವ ಸೇವೆ, ನವರಾತ್ರಿ ಕಲ್ಪೋಕ್ತ ಪೂಜೆ, ವಿಶೇಷ ಹೂವಿನ ಪೂಜೆ ನಡೆಯಲಿದೆ. ಮಧ್ಯಾಹ್ನ ಸಾರ್ವಜನಿಕರಿಗೆ ಮಹಾ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ.
ಶ್ರೀ ದೇವಳಕ್ಕೆ ಆಗಮಿಸುವ ಭಕ್ತರಿಗೆ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆ, ಮತ್ತು ಕಡಿಯಾಳಿ ಟೆಲಿಫೋನ್ ಎಕ್ಸ್ಚೇಂಜ್ ಒಳಭಾಗ ದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯರು ತಿಳಿಸಿದ್ದಾರೆ.

ನವರಾತ್ರಿಯ ಈ ಶುಭ ಸಮಯದಲ್ಲಿ ಸೇವೆ ನೀಡಲು ಇಚ್ಛಿಸುವ ಸೇವಾರ್ಥಿಗಳು ಈ ಕೆಳಗಿನ ಬ್ಯಾಂಕ್ ಖಾತೆಗೂ ಸಲ್ಲಿಸಬಹುದು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Bank Account Details:
Account No : 8032500100296601
Name: Kadiyali Mahishamardhini Temple
Branch: Karnataka Bank Kunjibettu, Udupi
IFSC Code : KARB0000803

ಸರಕಾರದ COVID19 ನಿಯಮದಂತೆ, ಮಾಸ್ಕ್ ಧರಿಸುವುದು ಕಡ್ಡಾಯ, ಅಂತರ ಕಾಪಾಡಿಕೊಂಡು ಭಕ್ತರು ಸಹಕರಿಸಬೇಕಾಗಿ ಕೋರಲಾಗಿದೆ.

 
 
 
 
 
 
 
 
 
 
 

Leave a Reply