ಕೊಡವೂರು : ಬ್ರಾಹ್ಮಣ ಮಹಾಸಭಾದ ರಜತೋತ್ಸವದ ವಿಶೇಷ ಧಾರ್ಮಿಕ ಕಾರ್ಯಕ್ರಮ, ಜನವರಿ 3 ರಿಂದ 9 ರವರೆಗೆ ನಡೆಯುವ “ಭಾಗವತ ಸಪ್ತಾಹ ಹಾಗೂ ಶಾಕಲ ಋಕ್ ಸಂಹಿತಾ ಯಾಗ” ಇದರ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಪಲಿಮಾರು ಮಠದ ಪರಮ ಪೂಜ್ಯ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶೀಪಾದರು ಬಿಡುಗಡೆಗೊಳಿಸಿ ಕಾರ್ಯಕ್ರಮದ ಯಶಸ್ಸಿಗೆ ಆಶಿರ್ವಚಿಸಿ ಶುಭ ಹಾರೈಸಿದರು.
ಸಂಸ್ಥೆಯ ಅಧ್ಯಕ್ಷ ನಾರಾಯಣ ಬಲ್ಲಾಳ್, ರಜತೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ಭಟ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ರಾವ್, ಧಾರ್ಮಿಕ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಟ್, ಸುರೇಂದ್ರ ಉಪಾಧ್ಯಾಯ, ಕಂಬಳಕಟ್ಟ, ಶಿವರಾಜ ಉಪಾಧ್ಯಾಯ, ಕಂಬಳಕಟ್ಟ, ಶ್ರೀನಿವಾಸ ಉಪಾಧ್ಯಾಯ ಹಾಗೂ ಪ್ರಸನ್ನ ಕೊಡವೂರು ಉಪಸ್ಥಿತರಿದ್ದರು.