ಉಡುಪಿ : ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆಯಲ್ಲಿ ಕಾರ್ತಿಕ ಮಾಸದ ಅಂಗವಾಗಿ ಆದಿತ್ಯವಾರ ಮುಂಜಾನೆ 5 ಕ್ಕೆ ಪಶ್ಚಿಮ ಜಾಗರ ಪೂಜೆ, ಸುಪ್ರಭಾತ , ಕಾಕಡ ಆರತಿ, ಶ್ರೀ ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ ವಿಶ್ವ ರೂಪ ದರ್ಶನ ನೆರವೇರಿತು.
ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಶ್ರೀ ರಾಮ ಮಂದಿರ, ತಿರುಪತಿ ಶ್ರೀನಿವಾಸ ದರ್ಶನ, ಗಣಪತಿ ಈಶ್ವರ, ಕಡಗೋಲು ಕೃಷ್ಣ ,ಪಾಂಡುರಂಗ ವಿಠ್ಠಲ, ರಂಗೋಲಿಯ ಚಿತ್ತಾರ, ಹೂಗಳಿಂದ ರಚಿಸಿದ ರಂಗೋಲಿ, ಹಣತೆಯ ದೀಪದಿಂದ ಓಂ, ಸ್ವಸ್ತಿಕ್, ಶಂಖ ಚಕ್ರಗಳನ್ನು ರಚಿಸಲಾಯತು.
ನೂರಾರು ಭಕ್ತರು ಸರತಿ ಸಾಲಿನಲ್ಲಿ ಬಂದು ಶ್ರೀ ದೇವರ ದರ್ಶನ ಪಡೆದರು. ಶ್ರೀ ದೇವರಿಗೆ ವಿಶೇಷ ಅಲಂಕಾರ ಹಾಗು ಮಹಾ ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಯತು.
ಅರ್ಚಕ ದಯಾಘನ್ ಭಟ್,ವಿನಾಯಕ ಭಟ್, ಆಡಳಿತ ಮೊಕ್ತೇಸರ ಪಿ.ವಿ.ಶೆಣೈ, ಆಡಳಿತ ಮಂಡಳಿ ಸದಸ್ಯರಾದ ಗಣೇಶ್ ಕಿಣಿ, ರೋಹಿತಾಕ್ಷ ಪಡಿಯಾರ್, ವಸಂತ್ ಕಿಣಿ,ವಿಶ್ವನಾಥ್ ಭಟ್, ಜಿ ಎಸ್ ಬಿ ಯುವಕ ಮಂಡಳಿ ಅದ್ಯಕ್ಶ ನಿತೇಶ್ ಶೆಣೈ, ವಿಶಾಲ್ ಶೆಣ್ಣ್ಯ್, ಭಾಸ್ಕರ್ ಶೆಣೈ ಮತ್ತು ಜಿ.ಸ್.ಬಿ. ಯುವಕ ಮಂಡಳಿ, ಮಹಿಳಾ ಮಂಡಳಿ ಸದಸ್ಯರು ಸಮಾಜ ಬಂದವರು ಉಪಸ್ಥಿತರಿದ್ದರು.