ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ , ಜಿ.ಎಸ್,ಬಿ ಮಹಿಳಾ ಮಂಡಳಿಯ ವತಿಯಿಂದ ಶುಕ್ರವಾರ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಭುವನೇಂದ್ರ ಮಂಟಪದಲ್ಲಿ ಜರಗಿತು. ಧಾರ್ಮಿಕ ಪೂಜಾ ಕಾರ್ಯಕ್ರಮವನ್ನು ದಯಾಘನ್ ಭಟ್ ನೆರವೇರಿಸಿದರು. ಪೂಜಾ ಕಾರ್ಯದಲ್ಲಿ ರಾಧಾಕೃಷ್ಣ ದಂಪತಿಗಳು ಸಹಕರಿಸಿದರು. ಮಹಿಳಾ ಮಂಡಳಿಯ ಸದಸ್ಯರಿಂದ ಸಾಮೂಹಿಕ ಕುಂಕುಮಾರ್ಚನೆ ನೆಡೆಯಿತು.