ಪಣಿಯಾಡಿಯ ಶ್ರೀ ಅನಂತಪದ್ಮನಾಭ ದೇವಾಲಯ: ನವೀಕರಣದ ಪ್ರಥಮ ಹಂತದ ಶಿಲಾಮಯ ಗರ್ಭಗೃಹ ಸಮರ್ಪಣೆ

ಉಡುಪಿ: ಶ್ರೀ ಪುತ್ತಿಗೆ ಮಠದ ಆಡಳಿತದ, ಉಡುಪಿಯ ಇತಿಹಾಸ ಪ್ರಸಿದ್ಧ ಪಣಿಯಾಡಿಯ ಶ್ರೀ ಅನಂತಪದ್ಮನಾಭ ದೇವಾಲಯದ ನವೀಕರಣದ ಪ್ರಥಮ ಹಂತ  ಶಿಲಾಮಯ ಗರ್ಭಗೃಹ,ಹಾಗೆ ಶಿಲಾಮಯ ತೀರ್ಥಮಂಟಪ ನಿರ್ಮಿಸಿ ದೇವರಿಗೆ ಸಮರ್ಪಣೆ ಶ್ರೀದೇವರ ಪುನಃಪ್ರತಿಷ್ಠೆ, ಬ್ರಹ್ಮ ಕಲಶ ಅಭಿಷೇಕವು ನಡೆಯುವುದರ ಮೂಲಕ ಸಂಪನ್ನಗೊಂಡಿತು.

ಪುತ್ತಿಗೆ ಶ್ರೀಪಾದರ ಉಪಸ್ಥಿತಿಯಲ್ಲಿ ವೇ. ಮೂ. ಪುತ್ತೂರು ಹಯವದನ ತಂತ್ರಿ ಹಾಗೂ ಪಂಜ ಭಾಸ್ಕರ ಭಟ್ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಸಾಂಗವಾಗಿ ಸರಳವಾಗಿ ನೆರವೇರಿತು. ಎರಡನೇ ಹಂತದ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಕೋವಿಡ್19ರ ಮಾರ್ಗಸೂಚಿಯಂತೆ ಕಾರ್ಯಕ್ರಮಗಳನ್ನು ಶಾಸ್ತ್ರೀಯವಾಗಿ ಹಾಗೂ ಸರಳವಾಗಿ ಆಚರಿಸಲಾಯಿತು.

 
 
 
 
 
 
 
 
 
 
 

Leave a Reply