ಸಮಸ್ತ ಸನಾತನ ಹಿಂದೂ ಸಮಾಜದ ಅಸ್ಮಿತೆಯ ಪ್ರತೀಕವೆನಿಸಿದ ಅಯೋಧ್ಯೆಯ ಶ್ರೀರಾಮಚಂದ್ರನ ಮಂದಿರ ನಿರ್ಮಾಣದ ಸಂದರ್ಭದಲ್ಲಿ, ಅಯೋಧ್ಯೆಯ ರಾಮಮಂದಿರ ಟ್ರಸ್ಟಿನ ಮುಖ್ಯಸ್ಥರಾಗಿ ದಕ್ಷಿಣಭಾರತದ ಏಕೈಕ ಪ್ರತಿನಿಧಿಗಳೆನಿಸಿದ, ಅಯೋಧ್ಯೆಯ ನೂತನ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಾಗೂ ಮಂಡಲಪರ್ಯಂತ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದ ಹಿರಿಮೆಯುಳ್ಳ, ನಮ್ಮ ಶ್ರೀಗಳ ವಿಶೇಷ ಪ್ರೀತಿ ವಾತ್ಸಲ್ಯಕ್ಕೆ ಪಾತ್ರರಾದ, ಪರಮಪೂಜ್ಯ ಪೇಜಾವರ ಮಠದ ಶ್ರೀ ಶ್ರೀ ವಿಶ್ವೇಶತೀರ್ಥರ ವರಕುಮಾರರಾದ, ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ದಿನಾಂಕ 17-03-2024ರಂದು ಉಡುಪಿಗೆ ಶ್ರೀಕೃಷ್ಣಮಠಕ್ಕೆ ಆಗಮಿಸಲಿದ್ದು, ಪೂಜ್ಯರಿಗೆ ಅಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥರ ದಿವ್ಯೋಪಸ್ಥಿತಿಯಲ್ಲಿ ಬೆಳಿಗ್ಗೆ 11-30ಕ್ಕೆ ರಾಜಾಂಗಣದ ಶ್ರೀಉಪೇಂದ್ರತೀರ್ಥ ವೇದಿಕೆಯಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
ಎಲ್ಲ ಆಸ್ತಿಕ ಭಕ್ತವೃಂದ ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಧ್ಯಾಹ್ನದ ಕೃಷ್ಣಪ್ರಸಾದ ಸ್ವೀಕರಿಸಿ ಕಾರ್ಯಕ್ರಮವನ್ನು ಅಂದಗಾಣಿಸಿಕೊಡಬೇಕಾಗಿ ಶ್ರೀಕೃಷ್ಣಮಠದ ಪ್ರಕಟಣೆ ತಿಳಿಸಿದೆ.