ಶ್ರೀಕೃಷ್ಣಮಠಕ್ಕೆ ಮಧ್ಯಪ್ರದೇಶದ ಸನಾತನ ಧರ್ಮ ಸೇವಾ ಸಮಿತಿಯ ಅಧ್ಯಕ್ಷೆ ವಿಶ್ವ ಹಿಂದೂ ಪರಿಷತ್ತಿನ ಪ್ರಚಾರಕಿ ಸಾದ್ವೀ ಸರಸ್ವತೀ ಇವರು ಆಗಮಿಸಿ ದೇವರ ದರ್ಶನ ಪಡೆದರು. ಬಳಿಕ ಮಠದ ಗೋಶಾಲೆಯಲ್ಲಿ ಗೋವುಗಳನ್ನು ವೀಕ್ಷಿಸಿ, ಅದಮಾರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.