ಉಡುಪಿ: ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರದಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದರು.
ದೇವಳದ ಶ್ರೀ ಗೋಪಾಲಕೃಷ್ಣ ಸಾಮಗ ರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಡಾ. ಸುಧಾಕರ್ ಶಾಸಕ ರಘುಪತಿ ಭಟ್ , ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಘವೇಂದ್ರ ಕಿಣಿ, ಅನಂತ ಸಾಮಗ, ಸುಬ್ರಮಣ್ಯ ಸಾಮಗ ಉಪಸ್ಥಿತರಿದ್ದರು.