ಉಡುಪಿ ; ಬನ್ನಂಜೆ ಗರಡಿ ರಸ್ತೆ ಶ್ರೀ ಶನಿ ಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರ ದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ ಶುಕ್ರವಾರ ಶನೈಶ್ಚರ ಜಯಂತಿ ಹಾಗೂ ವಾರ್ಷಿಕ ಶನೈಶ್ವರ ಉತ್ಸವವು ಬನ್ನಂಜೆ ರಾಘವೇಂದ್ರ ತೀರ್ಥ ಶ್ರೀಪಾದರ ದಿವ್ಯ ಮಾರ್ಗದರ್ಶನದಲ್ಲಿ ನೆಡೆಯಿತು.
ಬೆಳಿಗ್ಗೆ ಸಾಮೂಹಿಕ ಪ್ರಾಥನೆ ಶ್ರೀ ರಾಮ ವಿಠ್ಠಲ, ಹಾಗು ಶನೈಶ್ಚರ ಸ್ವಾಮಿಯ ಸನ್ನಿದಿಯಲ್ಲಿ ಶನಿಶಾಂತಿ ಪುರಸ್ಪರ ಜಯ ಸೂಕ್ತಯಾಗದ ಧಾರ್ಮಿಕ ಪೂಜಾ ವಿಧಾನಗಳು ಕೊರಂಗ್ರಪಾಡಿ ಕುಮಾರಗುರು ತಂತ್ರಿ ನೇತೃತ್ವದಲ್ಲಿ ಅರ್ಚಕ ವೃಂದದವರು ನೆಡೆಸಿಕೊಟ್ಟರು.
ಶ್ರೀ ದೇವರ ಸನ್ನಿದಿಯಲ್ಲಿ, ಪಂಚಾಮೃತ ಅಭಿಷೇಕ,ಯಾಗದ ಪೂರ್ಣಾಹುತಿ, ಪಲ್ಲಪೂಜೆ, ಮಂಡಲಪೂಜೆ, ಉತ್ಸವ ಬಲಿ ಪೂಜೆ ಜರಗಿತು. ಭಕ್ತಾಧಿಗಳು ಶನಿ ದೇವರಿಗೆ ತೈಲಾಭಿಷೇಕ, ಎಳ್ಳು ದೀಪ ಬೆಳಗಿಸಿ, ಸಾಮೂಹಿಕ ಶನಿಶಾಂತಿ ಯಾಗದಲ್ಲಿ ಭಾಗವಹಿಸಿದರು. ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು. ಸಮಾರಂಭದಲ್ಲಿ ಸತ್ಯನಾರಾಯಣ ಆಚಾರ್ಯ, ಶ್ರೀಮತಿ ಜಯಲಕ್ಷ್ಮೀ ಆಚಾರ್ಯ, ಹ್ಲಾದ ಆಚಾರ್ಯ, ಯತೀಶ್ ಆಚಾರ್ಯ, ಶ್ರೀಪಾದ ಆಚಾರ್ಯ , ಪೂಜಾ ಆಚಾರ್ಯ, ಪ್ರತೀಕ ಆಚಾರ್ಯ ಹಾಗೂ ನೂರಾರು ಭಕ್ತರೂ ಉಪಸ್ಥಿತರಿದ್ದರು.