ಶೀರೂರು ಮೂಲ ಮಠದಲ್ಲೇ ನೂತನ ಯತಿಯ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ

ಉಡುಪಿ: ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ದೇಹಾಂತ್ಯದ ಬಳಿಕ ತೆರವಾಗಿರುವ ಶೀರೂರು ಮಠಕ್ಕೆ ಉತ್ತರಾಧಿಕಾರಿ ಶಿಷ್ಯ ಪರಿಗ್ರಹಣಕ್ಕೆ ದ್ವಂದ್ವ ಮಠಾಧೀಶರಾದ ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಸಂಕಲ್ಪಿಸಿದ್ದಾರೆ. ಈಗಾಗಲೇ ಅನಿರುದ್ಧ ಸರಳತ್ತಾಯ ಎಂಬ ವಟುವನ್ನು ಆಯ್ಕೆ ಮಾಡಲಾಗಿದೆ.

ಈ ತಿಂಗಳ 11ರಿಂದ 14ರ ಪರ್ಯಂತ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಸೋಂದಾ ಕ್ಷೇತ್ರದಲ್ಲಿ ನೂತನ ಯತಿಯ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮ ಒಒಆಯೋಜಿಸಲು ನಿರ್ಧರಿಸಲಾಗಿತ್ತು.

ಆದರೆ, ಕೊರೊನಾ ಹಿನ್ನೆಲೆ ಸರ್ಕಾರದ ಮಾರ್ಗಸೂಚಿ ಪಾಲನೆ ಹಾಗೂ ಜನರ ಆರೋಗ್ಯದ ಹಿತದೃಷ್ಟಿಯನ್ನು ಗಮನಿಸಿ ಈ ಎಲ್ಲಾ ಕಾರ್ಯಕ್ರಮವನ್ನು ಉಡುಪಿ ಹಿರಿಯಡ್ಕ ಸಮೀಪದ ಶೀರೂರಿನ ಮೂಲಮಠಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸೋದೆ ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಸರಕಾರದ ನಿಯಮದಂತೆ ಸೀಮಿತ ಮಂದಿಯ ಉಪಸ್ಥಿತಿಯಲ್ಲಿ ಶೀರೂರು ಮೂಲ ಮಠದಲ್ಲಿ ಶಿಷ್ಯ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

 
 
 
 
 
 
 
 
 
 
 

Leave a Reply