ಎಡನೀರು ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀತೀರ್ಥ ಸ್ವಾಮೀಜಿ ಶ್ರೀಕೃಷ್ಣಮಠಕ್ಕೆ ಭೇಟಿ

ಶ್ರೀಕೃಷ್ಣಮಠದಲ್ಲಿಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಎಡನೀರು ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀತೀರ್ಥ ಸ್ವಾಮೀಜಿಯವರು ಆಗಮಿಸಿದಾಗ ಅವರನ್ನು ವೇದಘೋಷ, ಮಂಗಳವಾದ್ಯದೊಂದಿಗೆ ಸ್ವಾಗತಿಸಿ, ದೇವರ ದರ್ಶನ ಮಾಡಿಸಿ ಗೌರವಿಸಿದರು. 
ಎಡನೀರು ಶ್ರೀಪಾದರು, ಚಾತುರ್ಮಾಸ ವೃತ ಕೈಗೊಳ್ಳುವ ಮುಂಚಿತವಾಗಿ ಶ್ರೀಕೃಷ್ಣ ದೇವರ ದರ್ಶನ ಪಡೆದಿದ್ದು ಬಹಳ ಸಂತೋಷವಾಯಿತು ಎಂದರು. ಪರ್ಯಾಯ ಶ್ರೀಪಾದರು ತಮ್ಮ ಪರ್ಯಾಯದಲ್ಲಿ ಪ್ರಥಮವಾಗಿ ಆಗಮಿಸಿದ ಶ್ರೀಪಾದರಿಗೆ ಶುಭ ಹಾರೈಸಿದರು.
ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿoತಾಯರು ಸ್ವಾಗತಿಸಿದರು. ಆಸ್ಥಾನ ವಿದ್ವಾಂಸರಾದ ಕುತ್ಪಾಡಿ ಕೃಷ್ಣರಾಜ ಆಚಾರ್ಯರು ಕಾರ್ಯಕ್ರಮ ನಿರ್ವಹಿಸಿ ಮಠದ ಪ್ರಧಾನ ವ್ಯವಸ್ಥಾಪಕರಾದ  ಗೋವಿಂದರಾಜ್  ಧನ್ಯವಾದ ನೀಡಿದರು, ಪಿ.ಆರ್.ಓ ಶ್ರೀಶ ಕಡೆಕಾರ್ ಹಾಗೂ ಶ್ರೀಕೃಷ್ಣ ಸೇವಾ ಬಳಗದ ಸದಸ್ಯರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply