ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಭ್ರಮಕ್ಕೆ ಕ್ಷಣಗಣನೆ 

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಅಧಿಕಾರ ಆಯಾಯ ಜಿಲ್ಲಾಧಿಕಾರಿಗಳಿಗೆ..!

ಉಡುಪಿ, 12: ಈ ಬಾರಿ ಸಾರ್ವಜನಿಕವಾಗಿ ಗಣೇಶ ವಿಗ್ರಹ ಪ್ರತಿಷ್ಠೆ ಮಾಡಿ ಆಚರಿಸುವುದು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ದಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಪ್ರಕಟನೆ ಹೊರಡಿಸಿದ್ದಾರೆ.

ಈ ಬಗ್ಗೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವ ಅವರು, ಗೌರಿ ಗಣೇಶ ಹಬ್ಬದ ಪ್ರಯುಕ್ತ ಭಕ್ತಾಧಿಗಳು ಸಾರ್ವಜನಿಕವಾಗಿ ಗಣೇಶನ ಮಣ್ಣಿನ ಮೂರ್ತಿಗಳನ್ನು ಟೆಂಟ್-ಹೌಸಿನಲ್ಲಿಟ್ಟು ಪೂಜೆ ಸಲ್ಲಿಸಲು ಕೋರಿದ್ದು ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲಯಲ್ಲಿ ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ಆರೋಗ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಗಳ ಅನ್ವಯ ಭಕ್ತಾಧಿಗಳು ಸಾರ್ವಜನಿಕವಾಗಿ ಗೌರಿ-ಗಣೇಶ ಮೂರ್ತಿಗಳನ್ನಿಟ್ಟು ಹಬ್ಬ ಆಚರಿಸಲು ಸ್ಥಳೀಯವಾಗಿ ಪರಿಶೀಲಿಸಿ ಆಯಾಯ ಜಿಲ್ಲಾಧಿಕಾರಿಗಳ ಹಂತದಲ್ಲಿ ಅನುಮತಿ ನೀಡಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

 
 
 
 
 
 
 
 
 
 
 

Leave a Reply